Friday, February 8, 2013

ಫೆ.16ರಿಂದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮಿಲನ- ಪ್ರಜಾವಾಣಿ



ಕೆ.ಆರ್.ನಗರ: ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಸಹಯೋಗದಲ್ಲಿ ಪಟ್ಟಣದಲ್ಲಿ ಫೆಬ್ರುವರಿ 16 ಮತ್ತು 17ರಂದು ರಾಜ್ಯಮಟ್ಟದ ಶೈಕ್ಷಣಿಕ ಸಮ್ಮಿಲನ ಮತ್ತು `ಶಿಕ್ಷಣ ಶಿಲ್ಪಿ' ವಾರಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಟಿ. ಜವರೇಗೌಡ ತಿಳಿಸಿದರು.
ಪಟ್ಟಣದಲ್ಲಿ ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಬದಲಾವಣೆ ಅವಶ್ಯ. ಇಂತಹ ಬದಲಾವಣೆಗಳ ಬಗ್ಗೆ ಶಿಕ್ಷಕರ, ವಿದ್ಯಾರ್ಥಿಗಳ, ಪೋಷಕರ ಮತ್ತು ಸಮುದಾಯದ ಗಮನ ಸೆಳೆಯುವ ಉದ್ದೇಶದಿಂದ ಮತ್ತು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ದಿಸೆಯಲ್ಲಿ `ಶಿಕ್ಷಣ ಶಿಲ್ಪಿ' ಶೈಕ್ಷಣಿಕ ವಾರಪತ್ರಿಕೆ ಹೊರ ತರಲಾ ಗುತ್ತಿದೆ ಎಂದರು.
ಫೆ 16ರಂದು ನಡೆಯುವ ಉದ್ಘಾಟ ನಾ ಕಾರ್ಯಕ್ರಮಕ್ಕೆ ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಡಿಎಸ್‌ಇಆರ್‌ಟಿ ನಿರ್ದೇಶಕ ರಾಮ ರಾವ್, ಬಿಸಿಯೂಟ ಸಹನಿರ್ದೇಶಕ ಜಯಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅಧ್ಯಕ್ಷ ಪ್ರೊ. ಎಚ್.ಆರ್. ರಾಮಕೃಷ್ಣರಾವ್, ವಾರಪತ್ರಿಕೆ ಸಂಪಾದಕ ಈ.ನಂಜಪ್ಪ, ಶಾಸಕ ಸಾ.ರಾ. ಮಹೇಶ್ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಜ್ಞರು ಭಾಗವಹಿಸಲಿದ್ದಾರೆ ಎಂದರು.
`ಸಾರ್ವಜನಿಕ ಶಿಕ್ಷಣ- ನಮ್ಮ ಬದ್ಧತೆ' ಮತ್ತು `ಶಿಕ್ಷಣ ಹಕ್ಕು ಮಸೂದೆ' ಕುರಿತು ವಿಚಾರಗೋಷ್ಠಿ ನಡೆಯಲಿದೆ.
ಅದೇ ದಿನ ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಲಾವಿದ ಜನಾರ್ದನ್ ಅವರಿಂದ ಗಾಯನ, ಹುಲಿಕಲ್ ನಟರಾಜ್ ಅವರಿಂದ ಪವಾಡ ರಹಸ್ಯ ಬಯಲು ಪ್ರದರ್ಶನ, `ಚಂದನ ಚಿಗುರು' ಚಿತ್ರ ಪ್ರದರ್ಶನ, ಬೆಂಗಳೂರಿನ ಅಸ್ಟ್ರನಾಮಿಕಲ್ ಸೊಸೈಟಿ ವತಿಯಿಂದ ಆಕಾಶ ವೀಕ್ಷಣೆ ಏರ್ಪಡಿಸ ಲಾಗಿದೆ ಎಂದು ಬಿಇಒ ತಿಳಿಸಿದರು.
ಫೆ. 17ರಂದು `ವ್ಯಾಪಕ ಹಾಗೂ ನಿರಂತರ ಮೌಲ್ಯಮಾಪನ' ಕುರಿತು ಬೆಂಗಳೂರಿನ ಎಂಇಎಸ್ ಶಿಕ್ಷಣ ಮಹಾವಿದ್ಯಾಲಯದ ಪ್ರೊ.ಗಣೇಶ್ ಭಟ್ಟ ಮಾತನಾಡಲಿದ್ದಾರೆ. ವಿಜ್ಞಾನ ಕಲಿಕೆ, ಗಣಿತದ ಚಟುವಟಿಕೆಗಳು, ತರಗತಿಯಲ್ಲಿ ಪರಿಣಾಮಕಾರಿ ಸಂವಹನ, ಓರಿಗಾಮಿ, ಮಕ್ಕಳ ವಿಜ್ಞಾನ ಸಂಘಗಳನ್ನು ರಚಿಸಿ ನಡೆಸುವುದು ಹೇಗೆ, ಗಣಿತದ ಕಿಟ್ ಪರಿಚಯ, ಮಕ್ಕಳಿಗಾಗಿ ಬೇಸಿಗೆ ಶಿಬಿರ ಕುರಿತು ಕಾರ್ಯಾಗಾರ ನಡೆಯಲಿದೆ.
ಅಂದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ತಜ್ಞ ಜಿ.ಎಸ್. ಜಯದೇವ್, ಪಠ್ಯ ಪುಸ್ತಕ ನಿರ್ದೇಶನಾಲಯದ ಉಪ ನಿರ್ದೇಶಕ ಬೆಳ್ಳಶೆಟ್ಟಿ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಡಿಡಿಪಿಐಗಳು ಭಾಗವಹಿಸ ಲಿದ್ದಾರೆ. ಈ ಎರಡು ದಿನಗಳ ಕಾರ್ಯ ಕ್ರಮಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸುಮಾರು ಒಂದು ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿನಿಧಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಆಸಕ್ತರು ಫೆ. 15ರೊಳಗಾಗಿ ರೂ. 200 ಶುಲ್ಕ ನೀಡಿ ಹೆಸರು ನೋಂದಾಯಿಸಿ  ಕೊಳ್ಳ ಬಹುದಾಗಿದೆ ಎಂದು ತಿಳಿಸಿದರು.
ರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಕಾರ್ಯದರ್ಶಿ ಈ.ಬಸವರಾಜು, ಕ್ಷೇತ್ರ ಸಮನ್ವಯಾಧಿಕಾರಿ ಡಾ. ಬಿ.ಸಿ. ದೊಡ್ಡೇಗೌಡ, ಶಿಕ್ಷಕರಾದ ಲೋಕೇಶ್, ಗಿರೀಶ್, ಮಹೇಶ್, ಜಿ.ಟಿ. ರಾಮೇಗೌಡ, ಲಕ್ಷ್ಮೀಕಾಂತ್, ಜಗದೀಶ್ ಇದ್ದರು.

No comments:

Post a Comment